ಡಿಯರ್ ಪ್ರೆಂಡ್ಸ್, ಜಗತ್ತಿನಲ್ಲಿ ಯಾವುದು ಅಸಾದ್ಯವಲ್ಲ. ಅಸಾದ್ಯಗಳನ್ನೆಲ್ಲ ಸಾಧ್ಯವಾಗಿಸಿದ ಹಲವು ಸಾಮಾನ್ಯರಾದ
ಅಸಮಾನ್ಯ ವ್ಯಕ್ತಿಗಳು ನಮ್ಮ ನಡುವೆ ಇದ್ದಾರೆ. ಹನುಮಂತ ಲಂಕೆಗೆ ಹಾರಲು ಮೊದಮೊದಲು ಅಂಜುತ್ತಿದ್ದ,
ಆ ಸಂದರ್ಬದಲ್ಲಿ ಜಾಂಬವಂತ ಎಂಬ ಕರಡಿ ಅವನ ಶಕ್ತಿ ಸಾಮರ್ಥ್ಯಗಳನ್ನು ಅವನಿಗೆ ತಿಳಿಸಿ, ಹುರಿದುಂಬಿಸಿದಾಗ ಅವನು
ಸಮುದ್ರವನ್ನು ಹಾರಿದ.
ಭರವಸೆಯಿರಲಿ ಬದುಕಿನಲಿ ,
ಅದೊಂದಿದ್ದರೆ ಸಾಕು , ಜೊತೆಗೆ ಬರುವುದು ಎಲ್ಲವು ,
ಅಮವಾಸೆ ನಂತರ ಹುಣ್ಣಿಮೆ ಬರಲೇಬೇಕು,
ಕತ್ತಲೆಯೇ ಉತ್ತರವಲ್ಲ ನಿಮ್ಮೆಲ್ಲ ಪ್ರಶ್ನೆಗಳಿಗೆ,
ಪರಿಹಾರವಿಲ್ಲದ ಸಮಸ್ಯೆಗಳೇ ಇಲ್ಲ ಈ ಜಗದಲಿ,
ಶ್ರೀ ಕೃಷ್ಣ ಹೇಳಲಿಲ್ಲವೇ ಆದದ್ದೆಲ್ಲ ಒಳಿತೆ ಆಯಿತೆಂದು ,
ಭರವಸೆಯಿರಲಿ ಬದುಕಿನಲಿ,
ಸೂರ್ಯ ಮುಳುಗಿದ ನಂತರ ಚುಕ್ಕಿಗಳು ,ಬೆಳಗುವುದಿಲ್ಲವೇ ಭುವಿಯ,
ಎಂತೆನ್ತಹವರು ಇರುವರು ಜಗದಲಿ,
ಮಾಡಿಹರು ಅಪ್ರತಿಮ ಸಾಧನೆಯ ,ಎಲ್ಲ ವೈರುದ್ಯಗಳ ನಡುವೆ,
ಅಂಜುವೆ ಏಕೆ ಮನವೇ,
ಇರುವ ಅವಕಾಶಗಳ ಬಳಸಿಕೋ,
ಎದೆಯನ್ನು ಉಕ್ಕಾಗಿಸಿ ,ಬುದ್ದಿಶಕ್ತಿಯ ಅಸ್ತ್ರ ಬಳಸಿ ,
ವಿಧಿಗೆ ಸವಾಲೆಸಿ.
ಯಾವುದು ಅಸಾದ್ಯವಲ್ಲ ಈ ಜಗದಲಿ,
ಭರವಸೆಯಿರಲಿ ಈ ಬದುಕಿನಲಿ,
ನಂಬಿಕೆಯಿರಲಿ ನಿನ್ನ ಶಕ್ತಿ ,ಸಾಮರ್ಥ್ಯಗಳಲಿ,
ಬದುಕಾಗಲಿ ನೀ ಬಯಸಿದಂತೆ,
ಬಾಳು ಬೆಳಕಾಗಲಿ.
No comments:
Post a Comment